×
Ad

ಕಾರು-ದ್ವಿಚಕ್ರ ವಾಹನದ ನಡುವೆ ಅಪಘಾತ: ಸ್ಥಳದಲ್ಲೇ ವ್ಯಕ್ತಿ ಸಾವು

Update: 2019-05-06 22:09 IST

ಮೈಸೂರು,ಮೇ.6: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮೈಸೂರು-ನಂಜನಗೂಡು ರಸ್ತೆಯಲ್ಲಿ ನಡೆದಿದೆ.

ಮೃತರನ್ನು ನಂಜನಗೂಡಿನ ಬಸವಣ್ಣ(50) ಎಂದು ಗುರುತಿಸಲಾಗಿದ್ದು, ಇವರು ಮೈಸೂರು ವಿಮಾನ ನಿಲ್ದಾಣದ ರಸ್ತೆ ವಿಭಜಕದ ಬಳಿ ತಿರುವು ಪಡೆಯುವಾಗ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News