ಕಾಲುವೆಗೆ ಹಾರಿ ಆತ್ಮಹತ್ಯೆ

Update: 2019-05-07 16:41 GMT

ಶಂಕರನಾರಾಯಣ, ಮೇ 7: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಯೊಬ್ಬರು ಸಿದ್ದಾಪುರ ಗ್ರಾಮದ ಐರ್‌ಬೈಲು ವಾರಾಹಿ ಕಾಲುವೆಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 6ರಂದು ರಾತ್ರಿ ವೇಳೆ ನಡೆದಿದೆ.

ಮೃತರನ್ನು ಸಿದ್ಧಾಪುರ ಗ್ರಾಮದ ಕೋಡಿಗೆ ನಿವಾಸಿ ಶಂಕರನಾರಾಯಣ ಮಂಜ ಎಂಬವರ ಮಗ ಚಂದ್ರಶೇಖರ ಮಂಜ(57) ಎಂದು ಗುರುತಿಸ ಲಾಗಿದೆ. ಲಿವರ್ ತೊಂದರೆಯಿಂದ ಬಳಲುತ್ತಿದ್ದ ಇವರು ಮಾನಸಿಕವಾಗಿ ನೊಂದು ಕಾಲುವೆಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News