ವರದಕ್ಷಿಣೆ ಕಿರುಕುಳ ಆರೋಪ: ಸಾಫ್ಟ್ವೇರ್ ಉದ್ಯೋಗಿ ಆತ್ಮಹತ್ಯೆ
Update: 2019-05-07 16:46 GMT
ಬೆಂಗಳೂರು, ಮೇ 7: ಖಾಸಗಿ ಕಂಪೆನಿಯೊಂದರ ಸಾಫ್ಟ್ವೇರ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ಜೆಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳ ಎಂದು ಹೇಳಲಾಗುತ್ತಿದೆ.
ಸುಪ್ರಿಯಾ ಎಂಬಾಕೆ ಮೃತ ಸಾಫ್ಟ್ವೇರ್ ಉದ್ಯೋಗಿ ಎಂದು ತಿಳಿದುಬಂದಿದೆ.
ಸುಪ್ರಿಯಾ ಹಾಗೂ ಅವರ ಪತಿ ಇಬ್ಬರೂ ಸಹ ಖಾಸಗಿ ಕಂಪೆನಿಯಲ್ಲಿ ಸಾಫ್ಟ್ವೇರ್ ಉದ್ಯೋಗಿಗಳಾಗಿದ್ದು, ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದು, ಒಂದು ವರ್ಷದ ಮಗುವಿದೆ ಎಂದು ಹೇಳಲಾಗುತ್ತಿದೆ.
ಸೋಮವಾರ ರಾತ್ರಿ ಸುಪ್ರಿಯಾ, ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ವರದಕ್ಷಿಣೆ ಕಿರುಕುಳ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ಜೆ.ಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.