ರಾಜ್ಯದಲ್ಲಿ ಕೈಗೊಳ್ಳುವ ಕಾಮಗಾರಿಗಳಲ್ಲಿ ಅವಕಾಶ ನೀಡಲು ಮುಖ್ಯಮಂತ್ರಿಗೆ ಕೋರಿಕೆ
Update: 2019-05-08 16:33 GMT
ಬೆಂಗಳೂರು, ಮೇ 8: ರಾಜ್ಯದಲ್ಲಿ ಲೋಕೋಪಯೋಗಿ ಇಲಾಖೆ ಕೈಗೊಳ್ಳುವ ವಿವಿಧ ಕಾಮಗಾರಿಗಳನ್ನು ನಿರ್ವಹಿಸಲು ತಮಗೂ ಅವಕಾಶ ಕೊಡುವಂತೆ ಕೇಂದ್ರ ಲೋಕೋಪಯೋಗಿ ಇಲಾಖೆಯ ನಿರ್ದೇಶಕ ಪ್ರಭಾಕರ್ ಸಿಂಗ್, ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಬುಧವಾರ ನಗರದ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ ಪ್ರಭಾಕರ್ ಸಿಂಗ್, ಕೇಂದ್ರ ಲೋಕೋಪಯೋಗಿ ಇಲಾಖೆಯಲ್ಲಿ ತಾಂತ್ರಿಕ ಪರಿಣಿತಿ ಹೊಂದಿರುವ ತಜ್ಞರಿದ್ದು, ಅವರ ಸೇವೆಯನ್ನು ರಾಜ್ಯ ಸರಕಾರ ಬಳಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ರಾಜ್ಯದ ವಿವಿಧ ಯೋಜನೆಗಳಲ್ಲಿ ಕಾಮಗಾರಿ ನಿರ್ವಹಿಸಲು ಕೇಂದ್ರ ಲೋಕೋಪಯೋಗಿ ಇಲಾಖೆ ಉತ್ಸುಕವಾಗಿದೆ ಎಂದರು.
ರಾಜ್ಯ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ತಕ್ಷಣವೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಭೆಯಲ್ಲಿ ಹಾಜರಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದರು.