ಲಾರಿ ಅಡ್ಡಗಟ್ಟಿ ಸುಲಿಗೆಗೆ ಯತ್ನ: ದೂರು ದಾಖಲು

Update: 2019-05-08 16:36 GMT

ಬೆಂಗಳೂರು, ಮೇ 8: ಲಾರಿಯನ್ನು ಅಡ್ಡಗಟ್ಟಿ ಚಾಲಕ ಹಾಗೂ ಆತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಇಬ್ಬರು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಇಲ್ಲಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಲ್ಲೆಯಿಂದ ಗಾಯಗೊಂಡಿರುವ ಲಾರಿ ಚಾಲಕ ಸಿದ್ದೇಶ್ ಹಾಗೂ ಆತನ ಸ್ನೇಹಿತ ರಾಜ್‌ ಕುಮಾರ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ನಂದಿನಿ ಲೇಔಟ್ ಬಳಿ ಮಂಗಳವಾರ ತಡರಾತ್ರಿ ಲಾರಿ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕ ಸಿದ್ದೇಶ್‌ನನ್ನು ಇಬ್ಬರು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಹಣ, ಮೊಬೈಲ್ ನೀಡುವಂತೆ ಒತ್ತಾಯಿಸಿದ್ದು, ಈ ವೇಳೆ ಪ್ರತಿರೋಧ ತೋರಿದ ಸಿದ್ದೇಶ್ ಹಾಗೂ ಅವರ ಸ್ನೇಹಿತ ರಾಜ್‌ಕುಮಾರ್ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News