​ಬಟ್ಟೆ ಗೋದಾಮಿನಲ್ಲಿ ಬೆಂಕಿ: ಐವರ ಸಜೀವ ದಹನ

Update: 2019-05-09 03:28 GMT

ಪುಣೆ, ಮೇ 9: ಇಲ್ಲಿಗೆ ಸಮೀಪದ ಗ್ರಾಮವೊಂದರಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಭೀಕರ ಬೆಂಕಿ ಆಕಸ್ಮಿಕದಲ್ಲಿ ಐವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ.

ಬೆಂಕಿ ಆಕಸ್ಮಿಕ ಸಂಭವಿಸಿದಾಗ ಕಾರ್ಮಿಕರು ನಿದ್ರಿಸುತ್ತಿದ್ದರು ಎಂದು ತಿಳಿದುಬಂದಿದೆ. ಉರುಲಿ ದೇವಾಚಿ ಎಂಬ ಗ್ರಾಮದ ಬಟ್ಟೆ ಗೋದಾಮಿನಲ್ಲಿ ಈ ದುರಂತ ಸಂಭವಿಸಿದೆ. ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದವು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.
ದುರಂತಕ್ಕೆ ಕಾರಣ ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News