ಪಿ.ಎ.ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Update: 2019-05-09 12:42 GMT

ಕೊಣಾಜೆ: ಕೊಣಾಜೆ ನಡುಪದವಿನ ಪಿ.ಎ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ವ್ಯಾಸಾಂಗ ಮಾಡುತ್ತಿರುವ ಅಂತಿಮ ವರ್ಷದ ಬಿ.ಇ, ಎಮ್.ಟೆಕ್ ಹಾಗೂ ಎಂ.ಬಿ.ಎ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ ನಡೆಯಿತು. 

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಿ.ಎ. ವಿದ್ಯಾ ಸಂಸ್ಥೆಯ ಕಾರ್ಯನಿರ್ದೇಶಕರಾದ ಅಬ್ದುಲ್ಲಾ ಇಬ್ರಾಹಿಂ ಭಾಗವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಶರೀಫ್ ವಹಿಸಿದ್ದರು. ಇದೇ ಸಂಧರ್ಭದಲ್ಲಿ ಕಾಲೇಜಿನ 2018-19ರ ಸಾಲಿನ ಸುದ್ದಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ವಿವಿಧ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನದ ಅನುಭವವನ್ನು ಹಂಚಿಕೊಂಡರು. 

ಕಾರ್ಯಕ್ರಮದಲ್ಲಿ ಶೈಕ್ಷಣಿಕ ನಿರ್ದೇಶಕ ಡಾ. ಸರ್ಫರಾಜ್ ಜೆ. ಹಾಷಿಮ್, ಎಂಬಿಎ ವಿಭಾಗದ ನಿರ್ದೇಶಕರಾದ ಡಾ. ಲತಾ ಕೃಷ್ಣನ್, ವಿವಿಧ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಪ್ರೊ. ಮಹಮದ್ ಅನಿಕ್ ಪ್ರಾರ್ಥಿಸಿದರು.  ಪ್ರೊ. ಪ್ರವೀಣ್ ಸುವರ್ಣಾ ಸ್ವಾಗತಿಸಿ, ಪ್ರೊ. ಇಸ್ಮಾಯಿಲ್ ಶಾಫಿ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News