ಉದ್ಯೋಗ ಸೃಜನ ಕಾರ್ಯಕ್ರಮ ಮತ್ತು ಕಂಪ್ಯೂಟರೈಸ್ಡ್ ಅಕೌಟಿಂಗ್ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Update: 2019-05-09 16:38 GMT

ಬೆಳ್ತಂಗಡಿ: ರುಡ್‍ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮ ಮತ್ತು ಕಂಪ್ಯೂಟರೈಸ್ಡ್ ಅಕೌಟಿಂಗ್ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭವು ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ನ ಕಾರ್ಯದರ್ಶಿಯಾದ ವೀರುಶೆಟ್ಟಿಯವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸುತ್ತಾ ವ್ಯವಹಾರದಲ್ಲಿ ಹೊಸತನವಿರಲಿ ಮತ್ತು ಸಮಸ್ಯೆಗಳಿಗೆ ಎದೆಗುಂದದಿರಿ ಎಂದು ಹಿತವಚನ ನೀಡಿದರು. 

ರುಡ್‍ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ  ಎಮ್. ಜನಾರ್ಧನ್‍ರವರು ಉಪಸ್ಥಿತರಿದ್ದರು. ನಿರ್ದೇಶಕರಾದ ವಿನಯ್‍ಕುಮಾರ್ ರವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಹಿರಿಯ ಉಪನ್ಯಾಸಕರಾದ  ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ ಅನಸೂಯ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News