ಮಂಡ್ಯ: ಬಾಲಕಿ ಮೇಲೆ ನಾಯಿ ದಾಳಿ

Update: 2019-05-09 17:13 GMT

ಮಂಡ್ಯ, ಮೇ 9: ತಾಲೂಕಿನ ರಾಗಿಮುದ್ದನಹಳ್ಳಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವವರ ನಾಯಿಗಳು ಬಾಲಕಿ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಹರ್ಷಿತಾ(12) ಎಂಬ ಬಾಲಕಿ ಗಾಯಗೊಂಡಿದ್ದು, ತಕ್ಷಣ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ರಾಗಿಮುದ್ದನಹಳ್ಳಿ ಗ್ರಾಮದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಜೆಲ್ಲಿ ಕ್ರಷರ್ ಹಾವಳಿ ಒಂದು ಕಡೆ ಆದರೆ, ಅವರೇ ಸಾಕಿಕೊಂಡಿರುವ ನಾಯಿಗಳ ಹಾವಳಿಯಿಂದ ರೈತರು ಹಾಗೂ ಸಾರ್ವಜನಿಕರು ತಮ್ಮ ಜಮೀನಿನ ಬಳಿ ಹೋಗಲು ಭಯಭೀತರಾಗಿದ್ದಾರೆ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News