ಹನೂರು: ಜೆಡಿಎಸ್, ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Update: 2019-05-09 17:29 GMT

ಹನೂರು, ಮೇ 9: ಜೆಡಿಎಸ್ ಮತ್ತು ಬಿಜೆಪಿ ಮುಖಂಡರಾದ ರಂಗಸ್ವಾಮಿ ಹಾಗೂ ಸುಂದರಪ್ಪ ಎಂಬವರು ಶಾಸಕ ನರೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ಮಾತನಾಡಿದ ಶಾಸಕರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಎಲ್ಲಾ ವಾರ್ಡ್‍ಗಳಲ್ಲೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ, ಹನೂರನ್ನು ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದು ಸಾಬೀತು ಪಡಿಸಿ ಎಂದರು.

ಈ ಸಂದರ್ಭ ರಾಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಮುಖಂಡರಾದ ಚಿಕ್ಕತಮಯ್ಯಗೌಡ, ಜಯಪ್ರಕಾಶ್‍ ಗುಪ್ತ, ಹನೂರು ರೋಟರಿ ಕ್ಲಬ್ ಅಧ್ಯಕ್ಷ ಸಿ ಗಿರಿಶ್ ಸೇರಿದಂತೆ ಅನೇಕರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News