ತೇಜಸ್ವಿನಿ ಬಾಯಿಬಿಟ್ಟರೆ ಬಿಜೆಪಿ ಬಣ್ಣ ಬಯಲಾಗಲಿದೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2019-05-10 12:40 GMT

ಬೆಂಗಳೂರು, ಮೇ 10: ‘ಕೇಂದ್ರ ಸಚಿವ ದಿ.ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿಯವರು ಬಾಯಿ ಬಿಟ್ಟರೆ ನಿಮ್ಮ(ಬಿಜೆಪಿ) ಬಣ್ಣ ಬಯಲಾಗಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿವಳ್ಳಿ ಸಾವಿಗೆ ಮೈತ್ರಿ ಸರಕಾರ ಕಾರಣ ಎಂಬ ಬಿಜೆಪಿ ಉಪಾಧ್ಯಕ್ಷ ಶ್ರೀರಾಮುಲು ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸಿ.ಎಸ್.ಶಿವಳ್ಳಿ ಸಾವಿಗೆ ಮೈತ್ರಿ ಸರಕಾರ ಕಾರಣ ಎಂದು ನಾಲಿಗೆ ಹರಿಬಿಟ್ಟಿರುವ ಬಿಜೆಪಿ ನಾಯಕರೇ, ಅನಂತಕುಮಾರ್ ಪತ್ನಿಗೆ ನೀಡಿರುವ ಕಿರುಕುಳವನ್ನು ನೆನಪು ಮಾಡಿಕೊಳ್ಳಿ. ಎಲ್ಲವನ್ನೂ ಸಹಿಸಿಕೊಂಡಿರುವ ಧೈರ್ಯವಂತ ಹೆಣ್ಣುಮಗಳು ತೇಜಸ್ವಿನಿಯವರು ಬಾಯಿ ಬಿಟ್ಟರೆ ನಿಮ್ಮ ಬಣ್ಣ ಬಯಲಾಗಲಿದೆ ಎಂದು ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

‘ಶಿವಳ್ಳಿ ಸಾವಿಗೆ ಮೈತ್ರಿ ಸರಕಾರವೇ ಕಾರಣ. ಶಿವಳ್ಳಿಯವರು ಈಗ ನಮ್ಮ ನಡುವೆ ಇಲ್ಲ. ಮೈತ್ರಿ ಸರಕಾರದ ಕಿರುಕುಳದಿಂದಲೇ ಮೃತಪಟ್ಟಿದ್ದಾರೆ. ಆದರೆ ಕುಂದಗೋಳದ ಜನರಿಗೆ ಸೇಡು ತಿರಿಸಿಕೊಳ್ಳುವ ಸಮಯ ಈಗ ಬಂದಿದೆ’ ಎಂದು ಶ್ರೀರಾಮುಲು ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News