ಹೊಳೆಯಲ್ಲಿ ಮುಳುಗಿ ಮೃತ್ಯು

Update: 2019-05-10 16:57 GMT

ಬೈಂದೂರು, ಮೇ 10: ಹೊಳೆಯಲ್ಲಿ ಬಟ್ಟೆ ಹೊಗೆಯುತ್ತಿದ್ದ ವ್ಯಕ್ತಿಯೊಬ್ಬರು ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ಸಂಕದಗುಂಡಿ ಸೇತುವೆಯ ಬಳಿ ಮೇ 9ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಸಂಕದಗುಂಡಿಯ ಪರಮೇಶ್ವರ ಮೇಸ್ತ ಎಂಬವರ ಮಗ ನಾಗರಾಜ ಮೇಸ್ತ(38) ಎಂದು ಗುರುತಿಸಲಾಗಿದೆ. ಇವರು ಬಟ್ಟೆ ತೊಳೆಯು ವಾಗ ಕಾಲು ಜಾರಿ ಕಲ್ಲು ಬಂಡೆಯ ಮೇಲೆ ಬಿದ್ದು ತಲೆಗೆ ರಕ್ತಗಾಯವಾಗಿ ನೀರಿನಲ್ಲಿ ಮುಳುಗಿ ಉಸಿರುಕಟ್ಟಿ ಮೃತಪಟ್ಟಿದ್ದಾರೆಂದು ದೂರಲಾಗಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News