ಕಾಂಗ್ರೆಸ್‌ಗೆ ಸೋಲಿನ ಭೀತಿ: ಡಾ.ಉಮೇಶ್ ಜಾಧವ್

Update: 2019-05-11 12:59 GMT

ಕಲಬುರಗಿ, ಮೇ 11: ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ಸೋಲಿನ ಭೀತಿ ಎದುರಾಗಿದೆ. ಆದುದರಿಂದಲೇ, ಇಡೀ ಸರಕಾರವೇ ಬಂದು ಚಿಂಚೋಳಿ ಕ್ಷೇತ್ರದಲ್ಲಿ ಠಿಕಾಣಿ ಹೂಡಿದೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಟೀಕಿಸಿದ್ದಾರೆ.

ಶನಿವಾರ ಚಿಂಚೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಸತ್ಯ. ಈ ಹಿಂದೆ ಕಾಂಗ್ರೆಸ್ ನಾಯಕರು ನಮ್ಮ ಕುಟುಂಬ ಸದಸ್ಯರಿಗೆ ಟಿಕೆಟ್ ಕೊಟ್ಟು ಸೋಲಿಸಿದ್ದಾರೆ. ನನ್ನನ್ನೂ ಅದೇ ರೀತಿ ರಾಜಕೀಯವಾಗಿ ಕೆಳಗೆ ಬೀಳಿಸಲು ಪ್ರಯತ್ನಿಸಿದ್ದರೆಂದು ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News