​ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈಗೆ ಬೆದರಿಕೆ: ದೂರು

Update: 2019-05-11 16:20 GMT

ಪಡುಬಿದ್ರಿ, ಮೇ 11: ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಅವರಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಉಚ್ಚಿಲದ ಭಾಸ್ಕರ ನಗರದ ನಿವಾಸಿ ಆಸೀಪ್ ಹನೀಫ್ ಹಾಗೂ ಇಬ್ಬರು ಇಂಟರ್‌ನೆಟ್ ಮೂಲಕ ನನ್ನ ಮೊಬೈಲ್‌ಗೆ ಕರೆ ಮಾಡಿದ್ದಾರೆ. ಇಸ್ಲಾಂ ಧರ್ಮ ಹಾಗೂ ಬುರ್ಖಾ ವಿಷಯದ ವಿರುದ್ಧ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡುತಿದ್ದೀರಿ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬೈದಿದ್ದು, ಅಲ್ಲದೆ ನಮಗೆ ಹಣ ನೀಡಬೇಕು. ಇಲ್ಲದಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಅನುಪಮಾ ಶೆಣೈ ಪಡುಬಿದ್ರೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News