ಕಾವೇರಿ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು
Update: 2019-05-12 11:44 GMT
ಮಂಡ್ಯ, ಮೇ 12: ಶ್ರೀರಂಗಪಟ್ಟಣ ತಾಲೂಕು ಬೆಳಗೊಳದ ಬಲಮುರಿ ಬಳಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ನೀರುಪಾಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಮೈಸೂರಿನ ಗಾಂಧಿನಗರ ನಿವಾಸಿಗಳಾದ ಶಿವು(21) ಹಾಗೂ ಮಹದೇವ(20) ನೀರು ಪಾಲಾದವರು. ಒಟ್ಟು 6 ಮಂದಿ ಗೆಳೆಯರು ವಿಹಾರಕ್ಕೆ ಬಂದಿದ್ದರು ಎನ್ನಲಾಗಿದ್ದು, ಇವರ ಪೈಕಿ ಶಿವು ಹಾಗೂ ಮಹದೇವ ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.
ನದಿಯಲ್ಲಿ ಈಜುತ್ತಿದ್ದಾಗ ಸುಳಿಗೆ ಸಿಲುಕಿ ಶಿವು, ಮಹದೇವ ಕೊಚ್ಚಿಹೋಗಿದ್ದಾರೆ. ಈ ಪೈಕಿ ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬನಿಗಾಗಿ ಶೋಧ ಮುಂದುವರೆದಿದೆ.
ಕೆ.ಆರ್.ಎಸ್. ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.