ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-05-12 16:19 GMT

ಶಿರ್ವ, ಮೇ 12: ವೈಯಕ್ಕಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಬೆಳ್ಳೆ ಗ್ರಾಮದ ಪಡುಬೆಳ್ಳೆ ನಿವಾಸಿ ಸಿರಿಲ್ ಮಿನೇಜಸ್(47) ಎಂಬವರು ಮೇ 11ರಂದು ಮಧ್ಯಾಹ್ನ ವೇಳೆ ಮನೆಯ ಎದುರುಗಡೆ ಇರುವ ಬಾವಿಯ ರಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಹಂಗಳೂರು ಗ್ರಾಮದ ಬಯಲುಮನೆ ನಿವಾಸಿ ಪದ್ದು ಪೂಜಾರ್ತಿ(55) ಎಂಬವರು ಮೇ11ರಂದು ರಾತ್ರಿ ವೇಳೆ ಮನೆಯ ಎದುರಿನ ರೇವತಿ ಶೆಡ್ತಿ ಎಂಬವರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News