ದಾವಣಗೆರೆ: ರೌಡಿ ಶೀಟರ್ ಬುಳ್ ನಾಗನ ಬರ್ಬರ ಹತ್ಯೆ

Update: 2019-05-12 16:42 GMT

ದಾವಣಗೆರೆ, ಮೇ 12: ನಗರದ ಹೈಟೆಕ್ ಅಸ್ಪತ್ರೆ ಹಿಂಭಾಗವಿರುವ ಕೆಎಸ್‍ಆರ್‍ಟಿಸಿ ಬಸ್ ಡಿಪೋ ಬಳಿ ರೌಡಿ ಶೀಟರ್ ಬುಳ್ ನಾಗನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.   

ಹಳೇ ವೈಷ್ಯಮ್ಯವೇ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಡಿಸೆಂಬರ್ 9, 2017 ರಂದು ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಬಳಿ ಗ್ಯಾಂಗ್ ಒಂದು ಬುಳ್ ನಾಗನ ಮೇಲೆ ದಾಳಿ ಮಾಡಿತ್ತು. ಆದರೆ ನಾಗ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದ. ಆದರೆ ಕಳೆದ ರಾತ್ರಿ 11 ಗಂಟೆ ಸಮಯದಲ್ಲಿ ತನ್ನ ಸಹಚರರೊಂದಿಗೆ ಬೈಕ್ ನಲ್ಲಿ ಬರುತ್ತಿದ್ದಾಗ ದುಷ್ಕರ್ಮಿಗಳು ನಾಗನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೈದಿದ್ದಾರೆ. 

ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಘಟನೆ ಬಗ್ಗೆ ಮಾಹಿತಿ ಪಡೆದು, ಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸುವುದಾಗಿ ತಿಳಿಸಿದರು. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News