×
Ad

ಅರಿವು ಯೋಜನೆಯಡಿ ಇಂಜಿನಿಯರಿಂಗ್, ಮೆಡಿಕಲ್ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ

Update: 2019-05-13 20:17 IST

ಮಂಗಳೂರು, ಉಡುಪಿ, ಕೊಡಗು, ಮೇ 13: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಇದರ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಸಿಖ್ಖ್, ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು 2019-20ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಹಾಜರಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಕೈಗೊಳ್ಳಲು ನಿಗಮದಿಂದ ಇಂಜಿನಿಯರಿಂಗ್ ಕೋರ್ಸಿಗೆ ವಾರ್ಷಿಕ ಗರಿಷ್ಠ 56,000 ರೂ.ಹಾಗೂ ಬಿಡಿಎಸ್ ಮತ್ತು ಎಂಬಿಬಿಎಸ್ ಕೋರ್ಸ್‌ಗಳಿಗೆ ನೀಟ್ ಮೂಲಕ ವಾರ್ಷಿಕ ಗರಿಷ್ಟ 3,50,000 ರೂ. - ಶೇ.2ರ ಸೇವಾ ಶುಲ್ಕದ ಆಧಾರದ ಮೇಲೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತದೆ.

ಆನ್‌ಲೈನ್ ಅರ್ಜಿ ಸಲ್ಲಿಸಲು ಜೂನ್ 5 ಕೊನೆಯ ದಿನಾಂಕವಾಗಿದೆ.

ಈ ಸಂಬಂಧ 2019-20ನೇ ವರ್ಷದ ವೃತ್ತಿಪರ ಶಿಕ್ಷಣ ಸೇರ ಬಯಸುವ ಜಿಲ್ಲೆಯ ಕುಟುಂಬದ ವಾರ್ಷಿಕ ವರಮಾನ 6,00,000 ರೂ. ಮಿತಿಯಲ್ಲಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಸೂಚಿಸಲಾಗಿದೆ. ನಿಗಮದ ವೆಬ್‌ಸೈಟ್ kmdc.kar.nic.in/arivu2 ಲಿಂಕನ್ನು ತೆರೆದು ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ ಪ್ರಿಂಟ್‌ ಔಟ್‌ನ್ನು ತೆಗೆದುಕೊಂಡು  ಇತರೆ ದಾಖಲಾತಿಗಳೊಂದಿಗೆ ನೇರವಾಗಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಅಂತಹ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ಸಿಇಟಿಗೆ ಪಾವತಿಸಬೇಕಾದ ಶುಲ್ಕವನ್ನು ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೊಂದಾಣಿಕೆ ಮಾಡಲಾಗುತ್ತದೆ.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಮೌಲಾನಾ ಆಝಾದ್ ಅಲ್ಪಸಂಖ್ಯಾತರ ಭವನ, ಓಲ್ಡ್ ಕೆಂಟ್ ರೋಡ್, ಪಾಂಡೇಶ್ವರ, ಮಂಗಳೂರು -1, ಮತ್ತು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ‘ರಜತಾದ್ರಿ’ ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ, ಮಣಿಪಾಲ ಉಡುಪಿ ಜಿಲ್ಲೆ ಹಾಗೂ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ರಾಮಮಂದಿರ ಹಿಂಭಾಗ, ಹೊಟೇಲ್ ಹಿಲ್-ವ್ಯೆ ಹತ್ತಿರ, ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬಹುದು.

*ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು
1.ಜಾತಿ ಮತ್ತು ಆದಾಯ ಪ್ರಮಾಣ ಪತ್ರ 6,00,000 ರೂ.ಮಿತಿಯಲ್ಲಿರಬೇಕು.
2.ಆಧಾರ್ ಕಾರ್ಡ್ ಮತ್ತು ರೇಶನ್ ಕಾರ್ಡ್ ಜೆರಾಕ್ಸ್ ಪ್ರತಿ.
3.ಸಿಇಟಿ ಪರೀಕ್ಷೆ ಪ್ರವೇಶ ಪತ್ರ
4.ಎಸೆಸೆಲ್ಸಿ ಅಂಕ ಪಟ್ಟಿಯ ದೃಢೀಕೃತ ಪ್ರತಿ.
5. 50 ರೂ. ಇ-ಸ್ಟ್ಯಾಂಪ್‌ನೊಂದಿಗೆ ಇಂಡಿಮ್ನಿಟಿ ಬಾಂಡ್.
6. ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News