×
Ad

ನೂತನ ಫರಂಗಿಪೇಟೆ ರೋಟರಿ ಕ್ಲಬ್: ಸನ್ನದು ಪ್ರದಾನ ಕಾರ್ಯಕ್ರಮ

Update: 2019-05-13 20:58 IST

ಬಂಟ್ವಾಳ, ಮೇ 13: ಅಂತಾರಾಷ್ಟ್ರೀಯ ರೋಟರಿಯಲ್ಲಿ ಸದಸ್ಯತನ ಅಭಿವೃದ್ಧಿಯಲ್ಲಿ ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಮೈಸೂರು ರೋಟರಿ ಜಿಲ್ಲೆಗಳು ಮುಂಚೂಣಿಯಲ್ಲಿದೆ. ರೋಟರಿ ಸಂಸ್ಥೆಯು ಸ್ನೇಹ, ಸೌಹಾರ್ದತೆ, ಭಾವೈಕ್ಯತೆ, ಸಾಮರಸ್ಯಕ್ಕೆ ಆದ್ಯತೆ ನೀಡುತ್ತದೆ ಎಂದು ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ರೋಹಿನಾಥ್ ಪಾದೆ ಹೇಳಿದ್ದಾರೆ. 

ಅವರು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಪ್ರಾಯೋಜಕತ್ವದಲ್ಲಿ ಫರಂಗಿಪೇಟೆ ಸೇವಾಂಜಲಿ ಸಭಾಂಗಣದಲ್ಲಿ ನಡೆದ ನೂತನ ರೋಟರಿ ಕ್ಲಬ್ ಫರಂಗಿಪೇಟೆಯ ಸನ್ನದು ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೋಟರಿ ಕ್ಲಬ್ ಫರಂಗಿಪೇಟೆಯ ನೂತನ ಅಧ್ಯಕ್ಷ ಜಯರಾಮ ಶೇಖ ನೇತೃತ್ವದ 47 ಸದಸ್ಯರನ್ನು ರೋಟರಿ ಪಿನ್, ಪ್ರಮಾಣ ಪತ್ರ ನೀಡಿ ಪದ ಪ್ರದಾನ ಮಾಡಿದರು.

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣ ಕುಮಾರ್ ಪೂಂಜ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರಿ ಜಿಲ್ಲಾ ಕ್ಲಬ್ ವಿಸ್ತರಣಾಧ್ಯಕ್ಷ ಶೇಖರ್ ಶೆಟ್ಟಿ ನೂತನ ಸದಸ್ಯರಿಗೆ ಪುನಶ್ಚೇತನ ತರಬೇತಿ ನೀಡಿ ರೋಟರಿ ಕಾರ್ಯವಿಧಾನದ ಬಗ್ಗೆ ಮಾಹಿತಿ ನೀಡಿದರು.

ಸಮಾರಂಭದಲ್ಲಿ ರೋಟರಿ ಜಿಲ್ಲೆ3181ಇದರ ವಲಯ 4ರ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್, ವಲಯ ಸೇನಾನಿ ಸಂಜೀವ ಪೂಜಾರಿ ಗುರುಕೃಪ, ಗವರ್ನರ್ ವಿಶೇಷ ಪ್ರತಿನಿಧಿ ಚಂದ್ರಹಾಸ ಶೆಟ್ಟಿ ರಂಗೋಲಿ, ಕಾರ್ಯದರ್ಶಿ ಜಯರಾಜ್ ಬಂಗೇರ ಉಪಸ್ಥಿತರಿದ್ದರು. ವಲಯ ಕಾರ್ಯದರ್ಶಿ ನಾರಾಯಣ ಹೆಗ್ಡೆ ನೂತನ ಸದಸ್ಯರನ್ನು ಪರಿಚಯಿಸಿದರು.

ಸಭಾಧ್ಯಕ್ಷತೆ ವಹಿಸಿದ ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಉಮೇಶ್ ನಿರ್ಮಲ್ ಸ್ವಾಗತಿಸಿದರು. ನೂತನ ಕಾರ್ಯದರ್ಶಿ ರಮೇಶ್ ಶೆಟ್ಟಿ ವಂದಿಸಿದರು. ನರೇಂದ್ರನಾಥ ಭಂಡಾರಿ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News