ವಿಜಯಪುರ: ಲಾರಿ ಢಿಕ್ಕಿ; ಮೂವರು ಬೈಕ್ ಸವಾರರು ಮೃತ್ಯು

Update: 2019-05-14 08:33 GMT

ವಿಜಯಪುರ: ಲಾರಿ ಹಾಗೂ ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟ ಘಟನೆ ವಿಜಯಪುರ ನಗರದ ಇಟ್ಟಂಗಿಹಾಳ ರಸ್ತೆ ಬಳಿ ನಡೆದಿದೆ. 

ವಿಜಯಪುರ ನಗರದ ಶಾಪೇಟೆ ನಿವಾಸಿಗಳಾದ ಮನ್ಸೂಕ ಸಾಬ್, ಅನಿಲ್, ಪರಸಪ್ಪ ವಾಡೇಗೋಳ್ ಮೃತರು ಎಂದು ಗುರುತಿಸಲಾಗಿದೆ.

ಅಲ್ಲದೇ, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯನ್ನು ಅದರ ಚಾಲಕ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸಂಚಾರಿ ಹಾಗೂ ಆದರ್ಶ ನಗರ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಆದರ್ಶನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News