ಮೋದಿ ನೇಣಿಗೇರಲು ಸಿದ್ಧವಾದರೆ ರಸ್ತೆ ಸಿದ್ಧಪಡಿಸಿ ಕೊಡುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

Update: 2019-05-14 14:05 GMT

ಬೆಂಗಳೂರು, ಮೇ 14: ‘ಪ್ರಧಾನಿ ಮೋದಿ ನೇಣಿಗೇರಲು ಸಿದ್ಧವಾದರೆ ನಾವು ರಸ್ತೆ ಸಿದ್ಧಪಡಿಸಿಕೊಡುತ್ತೇವೆ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ, ಗರಿಷ್ಠ ಮೊತ್ತದ ನೋಟು ರದ್ದತಿಯಿಂದ ಎದುರಾಗಿರುವ ಸಮಸ್ಯೆ 50 ದಿನಗಳಲ್ಲಿ ಬಗೆಹರಿಯದಿದ್ದರೆ ನಡು ರಸ್ತೆಯಲ್ಲಿ ನನ್ನನ್ನು ನೇಣು ಹಾಕಿ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗಲೂ ಸಮಸ್ಯೆ ಹಾಗೆಯೇ ಇದೆ. ಆದುದರಿಂದ ನಾವು ರಸ್ತೆ ಮಾಡಿಕೊಡಲು ಸಿದ್ಧರಿದ್ದೇವೆ. ನೇಣಿಗೇರಲು ಮೋದಿ ಬರುತ್ತಾರೆಯೇ ಎಂದು ಕೇಳಿದರು.

ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕ್ಷಮೆಗೆ ಆಗ್ರಹಿಸುವ ಮುನ್ನ ಮೋದಿ ಸೇರಿ ಬಿಜೆಪಿ ನಾಯಕರು ಎಐಸಿಸಿ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ರಾಜೀವ್ ಗಾಂಧಿಯವರು ಬಗ್ಗೆ ಕೀಳಾಗಿ ಮಾತನಾಡಿರುವುದಕ್ಕೆ ಕ್ಷಮೆ ಕೇಳಬೇಕು ಎಂದು ಪ್ರಿಯಾಂಕ್ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News