ಫಲಿತಾಂಶ ಬಳಿಕ ಕೇಂದ್ರದಲ್ಲಿ ಮಾತ್ರ ಬದಲಾವಣೆ: ಸಚಿವ ಜಿ.ಟಿ.ದೇವೇಗೌಡ

Update: 2019-05-14 17:08 GMT

ಮಂಡ್ಯ, ಮೇ 14: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರಕಾದಲ್ಲಿ ಬದಲಾವಣೆ ಆಗುತ್ತದೆಯೇ ಹೊರತು ರಾಜ್ಯ ಸಮ್ಮಿಶ್ರ ಸರಕಾರದಲ್ಲಿ ಬದಲಾವಣೆ ಆಗುವುದಿಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯದಲ್ಲಿ ಪತ್ನಿ ಜತೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೇ23ರ ಫಲಿತಾಂಶದವರೆಗೂ ಕಾಯಿರಿ, ಯಾರು ಪ್ರಧಾನಿಯಾಗುತ್ತಾರೆ ಅನ್ನೋದು ಗೊತ್ತಾಗುತ್ತೆ ಎಂದರು.

ಕುಮಾರಸ್ವಾಮಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಧಿಕಾರ ಹೋಗುತ್ತದೆ ಅನ್ನುತ್ತಿದ್ದುದು ಸುಳ್ಳಾಗಿದೆ. ಈಗಲೂ ಹಾಗೆಯೇ ಹೇಳುತ್ತಿರುವುದು ಸುಳ್ಳಾಗಲಿದೆ. ಕುಮಾರಸ್ವಾಮಿ ಇನ್ನೂ ನಾಲ್ಕು ವರ್ಷ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಅವರು ಹೇಳಿದರು.

ಮೈತ್ರಿ ನಾಯಕರ ವಾಕ್ಸಮರ ಇಂದಿನಿಂದಲೇ ನಿಲ್ಲಲಿದೆ. ಹಿರಿಯರು ಈಗಾಗಲೇ ಕುಳಿತು ಮಾತನಾಡಿದ್ದಾರೆ. ಎಲ್ಲರಿಗೂ ಜ್ಞಾನೋದಯವಾಗಿದೆ. ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಾಗಿದೆ ಎಂದು ಅವರು ಪ್ರತಿಕ್ರಿಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News