ಉಳ್ಳಾಲ ಸೇತುವೆಯಡಿ ವ್ಯಕ್ತಿಯ ಮೃತದೇಹ ಪತ್ತೆ

Update: 2019-05-15 08:19 GMT

ಮಂಗಳೂರು, ಮೇ 15: ರಾ.ಹೆ.66ರ ಉಳ್ಳಾಲ ಸೇತುವೆಯಡಿ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ಕಂಡು ಬಂದಿದ್ದು, ಆತ್ಮಹತ್ಯೆಗೈದಿರಬೇಕು ಎಂದು ಶಂಕಿಸಲಾಗಿದೆ.

ಮೃತ ವ್ಯಕ್ತಿಯನ್ನು ಕೋಟೆಕಾರ್ ಸಮೀಪದ ಮಾಡೂರಿನ ಲೋಕಯ್ಯ ಎಂದು ಗುರುತಿಸಲಾಗಿದೆ. ಸುಮಾರು 70 ವರ್ಷ ಪ್ರಾಯದ ಈ ವ್ಯಕ್ತಿ ಮೂರು ದಿನದ ಹಿಂದೆ ಕಾಣೆಯಾಗಿದ್ದು, ನದಿಗೆ ಹಾರಿ ಆತ್ಮಹತ್ಯೆಗೈದಿರಬೇಕು ಎಂದು ಶಂಕಿಸಲಾಗಿದೆ. ಕೃತ್ಯಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ. 

ಮೃತದೇಹ ಊದಿದ್ದು, ಮುಖ ಗುರುತು ಹಿಡಿಯದ ಸ್ಥಿತಿಯಲ್ಲಿದೆ. ಉಳ್ಳಾಲ ನೇತ್ರಾವತಿ ಸೇತುವೆಯಡಿ ಮೃತದೇಹ ತೇಲುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಬಳಿಕ ಪೊಲೀಸರು ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿ ಮುಂದಿನ ಕ್ರಮ ಜರುಗಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News