ದೇವರಾಜ ಅರಸು ನಂತರ ಉತ್ತಮ ಆಡಳಿತಗಾರ ಸಿದ್ದರಾಮಯ್ಯ: ಎಚ್.ಸಿ.ಮಹದೇವಪ್ಪ

Update: 2019-05-15 14:56 GMT

ಹುಬ್ಬಳ್ಳಿ, ಮೇ 15: ಮಾಜಿ ಸಿಎಂ ದೇವರಾಜ ಅರಸು ನಂತರ ರಾಜ್ಯಕ್ಕೆ ಉತ್ತಮ ಆಡಳಿತ ನೀಡಿದ್ದು ಸಿದ್ದರಾಮಯ್ಯ ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾರು ಏನೇ ಹೇಳಲಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಹಲವು ಜನಪರ ಯೋಜನೆಗಳು ಜಾರಿಯಾಗಿವೆ. ಅನ್ನಭಾಗ್ಯ, ಇಂದಿರಾ ಕ್ಯಾಂಟಿನ್ ಯೋಜನೆಗಳೆ ಸಾಕ್ಷಿಯಾಗಿವೆ. ಆದರೆ, ಕೆಲವರು ಅವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲವೆಂದು ತಿಳಿಸಿದರು.

ಮೈತ್ರಿ ಪಕ್ಷಗಳ ವರಿಷ್ಠರು ಸೇರಿ ಈಗಾಗಲೇ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಿದ್ದಾರೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಇಲ್ಲ. ದಲಿತರು ಮುಖ್ಯಮಂತ್ರಿ ಆಗಬೇಕೆಂಬ ಕೂಗೂ ಇದೆ. ಹೀಗಾಗಿ ದಲಿತ ಮುಖಂಡರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಸಿಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News