ಮಣಿಪಾಲ: ಜಿಲ್ಲಾ ತಂಬಾಕು ನಿಯಂತ್ರಣ ತನಿಖಾದಳದಿಂದ ದಾಳಿ

Update: 2019-05-15 15:10 GMT

ಉಡುಪಿ, ಮೇ 15: ಉಡುಪಿ ಜಿಲ್ಲೆಯಲ್ಲಿ ಕೋಟ್ಪಾಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಉಡುಪಿ ತಾಲೂಕಿನ ಮಣಿಪಾಲ ಟೈಗರ್ ಸರ್ಕಲ್, ಎಂಐಟಿ ರೋಡ್, ಎಂಜೆಸಿ ರೋಡ್ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ ಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಒಟ್ಟು 24 ಪ್ರಕರಣಗಳನ್ನು ದಾಖಲಿಸಿ, 3,200 ರೂ. ದಂಡ ವಸೂಲಿ ಮಾಡಲಾಯಿತು. ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗರತ್ನ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಕೃಷ್ಣಪ್ಪ ಮತ್ತು ಆನಂದಗೌಡ, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಎನ್.ಟಿ.ಸಿ.ಪಿ. ಸಮಾಜ ಕಾರ್ಯಕರ್ತೆ ಶೈಲ ಎಸ್.ಎಂ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News