ರೇವಣ್ಣರಿಗೆ ಸಿಎಂ ಆಗುವ ಅರ್ಹತೆ ಇದೆ. ಎಲ್ಲದಕ್ಕೂ ಕಾಲ ಕೂಡಿ ಬರಬೇಕು : ಸಿದ್ದರಾಮಯ್ಯ

Update: 2019-05-16 06:19 GMT

ಬೆಂಗಳೂರು, ಮೇ 16: ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ‌ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ   ಟ್ವೀಟ್ ಮಾಡಿದ್ದಾರೆ.

 ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ‌ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ‌ ಕೂಡಿ ಬರಬೇಕು ಎಂದು ಅವರು ಟ್ವಿಟರ್ ನಲ್ಲಿ  ಹೇಳಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News