ಸಾಲ ಬಾಧೆ: ವ್ಯಕ್ತಿ ಆತ್ಮಹತ್ಯೆ

Update: 2019-05-16 16:10 GMT

ಬೆಂಗಳೂರು, ಮೇ 16: ಸಾಲ ಪಡೆದುಕೊಂಡ ವ್ಯಕ್ತಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಮಾರತಹಳ್ಳಿಯ ಮಂಜುನಾಥನಗರದ 2ನೇ ಕ್ರಾಸ್ ನಿವಾಸಿ ಬಾಬು(38) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಬಾಬು ಅವರು ವೈಯಕ್ತಿಕ ಕಾರಣಕ್ಕಾಗಿ ಸಾಲ ಮಾಡಿಕೊಂಡಿದ್ದರು. ಪಡೆದ ಸಾಲವನ್ನು ಹಿಂದಿರುಗಿಸಲು ಸಾಧ್ಯವಾಗದೆ ನೊಂದಿದ್ದ ಇವರು ರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದ ಎಚ್‌ಎಎಲ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News