ಗೋಡ್ಸೆಯನ್ನು ದೇಶಭಕ್ತ ಎಂದ ಪ್ರಜ್ಞಾ ಸಿಂಗ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ

Update: 2019-05-16 16:28 GMT

ಹೊಸದಿಲ್ಲಿ, ಮೇ 16: ನಾಥೂರಾಮ್ ಗೋಡ್ಸೆ ಓರ್ವ ದೇಶಭಕ್ತ ಎಂಬ ಪ್ರಜ್ಞಾ ಸಿಂಗ್ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ಬಿಜೆಪಿ ಅಭ್ಯರ್ಥಿಯ ಈ ವಿವಾದಾತ್ಮಕ ಹೇಳಿಕೆಗೆ ವಿಪಕ್ಷಗಳ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಧಾನಿಯಿಂದ ಈ ಬಗ್ಗೆ ಪ್ರತಿಕ್ರಿಯಿಸಬೇಕು ಎಂದಿದೆ.

“ನಾವು ಆಕೆಯ ಹೇಳಿಕೆಯನ್ನು ಒಪ್ಪುವುದಿಲ್ಲ ಹಾಗು ಖಂಡಿಸುತ್ತೇವೆ. ಈ ರೀತಿಯ ಹೇಳಿಕೆ ನೀಡಿದ್ದೇಕೆ ಎಂದು ಬಿಜೆಪಿ ಆಕೆಯನ್ನು ಪ್ರಶ್ನಿಸುತ್ತದೆ. ವಿವಾದಾತ್ಮಕ ಹೇಳಿಕೆಗಾಗಿ ಆಕೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು” ಎಂದು ಬಿಜೆಪಿ ವಕ್ತಾರ ಜಿ.ವಿ.ಎಲ್. ನರಸಿಂಹ ರಾವ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News