ರೇವಣ್ಣ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಜಿ.ಟಿ.ದೇವೇಗೌಡ ಪ್ರತಿಕ್ರಿಯಿಸಿದ್ದು ಹೀಗೆ...

Update: 2019-05-16 16:46 GMT

ಮೈಸೂರು,ಮೇ.17: ರೇವಣ್ಣ ಅವರ ಮೇಲಿನ ಪ್ರೀತಿಯಿಂದಷ್ಟೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರೇವಣ್ಣ ಮುಖ್ಯಮಂತ್ರಿಯಾಗುವ ಅರ್ಹತೆ ಹೊಂದಿದ್ದಾರೆ ಎಂದು ಹೇಳಿದ್ದಾರೆ ಎಂದು ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೇವಣ್ಣ ಮತ್ತು ಸಿದ್ದರಾಮಯ್ಯ ಅವರು 1995 ರ ರಿಂದಲೂ ಸ್ನೇಹಿತರು. ರೇವಣ್ಣ ಅವರನ್ನು ಕಂಡರೆ ಸಿದ್ದರಾಮಯ್ಯ ಅವರಿಗೆ ಪ್ರೀತಿ, ಹಾಗಾಗಿ ಅವರು ಆ ರೀತಿಯ ಟ್ವೀಟ್ ಮಾಡಿದ್ದಾರೆ. ಇದನ್ನು ಬೇರೆ ಅರ್ಥದಲ್ಲಿ ಕಲ್ಪಿಸುವುದು ಬೇಡ ಎಂದರು.

ಮುಖ್ಯಮಂತ್ರಿಯಾಗಲಿ ಎಂದರೆ ನಾಳೆಯೇ ಆಗಲಿ ಎಂದರ್ಥವಲ್ಲ, ರೇವಣ್ಣ ಸಮರ್ಥರಿದ್ದಾರೆ ಎಂದಷ್ಟೇ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News