ಕ್ಷಮೆ ಕೋರಿದ ಪ್ರಜ್ಞಾ ಸಿಂಗ್ ಠಾಕೂರ್

Update: 2019-05-16 18:28 GMT

ಭೋಪಾಲ್ ಮೇ 16: ಮಹಾತ್ಮಾ ಗಾಂಧಿ ಅವರನ್ನು ಹತ್ಯೆಗೈದ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಹೇಳಿದ ಗಂಟೆಗಳ ಬಳಿಕ ಪ್ರಜ್ಞಾ ಸಿಂಗ್ ಠಾಕೂರ್ ಕ್ಷಮೆ ಕೋರಿದ್ದಾರೆ ಹಾಗೂ ತನ್ನ ಹೇಳಿಕೆಯನ್ನು ಹಿಂದೆ ಹಿಂಪಡೆದಿದ್ದಾರೆ.

ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿರುವ ಬಿಜೆಪಿ, ಗಾಂಧಿ ಹಂತಕ ದೇಶಭಕ್ತನಾಗಲು ಸಾಧ್ಯವಿಲ್ಲ. ಆದುದರಿಂದ ನಾವು ಠಾಕೂರ್ ಹೇಳಿಕೆಯನ್ನು ಒಪ್ಪಲಾರೆವು ಎಂದಿದೆ. ಪ್ರಜ್ಞಾ ಸಿಂಗ್ ಠಾಕೂರ್ ಹೇಳಿಕೆ ನೀಡಿ ಅನಂತರ ಕ್ಷಮೆ ಯಾಚಿಸುತ್ತಿರುವುದು ಈ ತಿಂಗಳಲ್ಲಿ ಇದು ಎರಡನೇ ಬಾರಿ. ಕಳೆದ ತಿಂಗಳು “ಅವರು ನನ್ನ ಶಾಪದಿಂದ ಹೇಮಂತ್ ಕರ್ಕರೆ ಮುಂಬೈ ಭಯೋತ್ಪಾದಕ ದಾಳಿ ಸಂದರ್ಭ ಮೃತಪಟ್ಟರು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News