ಪ್ರಜ್ಞಾ, ನಳಿನ್, ಅನಂತ್ ಕುಮಾರ್ ಹೆಗಡೆ ಹೇಳಿಕೆಗೂ ಬಿಜೆಪಿಗೂ ಸಂಬಂಧವಿಲ್ಲ: ಅಮಿತ್ ಶಾ

Update: 2019-05-17 09:36 GMT

ಹೊಸದಿಲ್ಲಿ, ಮೇ 17: ಮಹಾತ್ಮಾ ಗಾಂಧೀಜಿಯ ಹಂತಕ ನಾಥೂರಾಮ್ ಗೋಡ್ಸೆಯನ್ನು ಬೆಂಬಲಿಸಿ ಬಿಜೆಪಿ ಅಭ್ಯರ್ಥಿಗಳಾದ ಪ್ರಜ್ಞಾ ಸಿಂಗ್, ನಳಿನ್ ಕುಮಾರ್ ಮತ್ತು ಅನಂತ್ ಕುಮಾರ್ ಹೆಗಡೆ ನೀಡಿರುವ ಹೇಳಿಕೆಯಿಂದ ಬಿಜೆಪಿ ದೂರ ಸರಿದು ನಿಂತಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪಕ್ಷದ ಅಧ್ಯಕ್ಷ ಅಮಿತ್ ಶಾ, “ಅನಂತ್ ಕುಮಾರ್ ಹೆಗಡೆ, ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ನಳಿನ್ ಕಟೀಲ್ ಅವರು ನೀಡಿರುವ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯಗಳಾಗಿವೆ. ಅವರ ಹೇಳಿಕೆಗಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.

ಈ ಮೂವರಿಂದಲೂ ಪಕ್ಷವು ವಿವರಣೆ ಕೋರಿದೆ. ಇದಕ್ಕಾಗಿ 10 ದಿನ ಕಾಲಾವಕಾಶ ನೀಡಲಾಗಿದೆ ಎಂದವರು ಹೇಳಿದ್ದಾರೆ.

“ಈ ಹೇಳಿಕೆಗಳಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಮೂವರೂ ಕ್ಷಮೆ ಯಾಚಿಸಿದ್ದಾರೆ. ಆದರೆ ಇದು ಪಕ್ಷದ ಸಿದ್ಧಾಂತದ ವಿರುದ್ಧವಾಗಿದೆ” ಎಂದವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News