ಮನೆಗೆ ನುಗ್ಗಿ ವ್ಯಕ್ತಿಗೆ ಮಾರಾಕಾಸ್ತ್ರಗಳಿಂದ ಹಲ್ಲೆ
Update: 2019-05-17 14:20 GMT
ಬೆಂಗಳೂರು, ಮೇ 17: ವ್ಯಕ್ತಿಯೊಬ್ಬರ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಗಂಭೀರ ಹಲ್ಲೆ ನಡೆಸಿ, ಪರಾರಿಯಾಗಿರುವ ಘಟನೆ ಇಲ್ಲಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೋರಮಂಗಲದ ಶಾಸ್ತ್ರೀ ನಗರದ ಗೋಪಿ ಎಂಬುವರ ಮೇಲೆ ಹಲ್ಲೆ ನಡೆಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬನಶಂಕರಿ ವ್ಯಾಪ್ತಿಯ ಮದ್ಯದಂಗಡಿಯೊಂದರಲ್ಲಿ ವ್ಯವಸ್ಥಾಪಕರಾಗಿರುವ ಗೋಪಿ ಮೇಲೆ ಮೇ 15ರ ರಾತ್ರಿ 2 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ, ಮನೆಯ ಬಳಿಯಿದ್ದ ವಾಹನಗಳನ್ನು ಜಖಂಗೊಳಿಸಿ ಅಲ್ಲಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಗೋಪಿ ಮೇಲಿನ ಹಲ್ಲೆಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.