ಮದ್ಯದ ಅಮಲಿನಲ್ಲಿದ್ದ ಆ್ಯಂಬುಲೆನ್ಸ್ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Update: 2019-05-17 14:27 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 17: ಮದ್ಯದ ಅಮಲಿನಲ್ಲಿ ಆ್ಯಂಬುಲೆನ್ಸ್ ಚಲಾಯಿಸಿ ದುಂಡಾವರ್ತನೆ ತೋರಿದ ಚಾಲಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಮಡಿವಾಳದಲ್ಲಿ ನಡೆದಿದೆ.

ಮಹಾರಾಷ್ಟ್ರ ಮೂಲದ ಸಂದೀಪ್ ಪಾಟೀಲ್ ಎಂಬಾತ ಮದ್ಯ ಸೇವಿಸಿ ಆ್ಯಂಬುಲೆನ್ಸ್ ಚಲಾಯಿಸುತ್ತಿದ್ದ ಚಾಲಕ ಎಂದು ತಿಳಿದುಬಂದಿದೆ.

ಸಂದೀಪ್, ಎಲೆಕ್ಟ್ರಾನಿಕ್ ಸಿಟಿ ಕಡೆಯಿಂದ ಮಡಿವಾಳದ ಮೂಲಕ ನಗರಕ್ಕೆ ಆಗಮಿಸುತ್ತಿದ್ದನು. ಬೆಂಗಳೂರಿನ ಮಡಿವಾಳ ಸರ್ಕಲ್ ನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರನ್ನು ಕಂಡ ಸಂದೀಪ್ ಪಾಟೀಲ್ ವಾಹನ ಬಿಟ್ಟು ಓಡಲು ಯತ್ನಿಸಿದ. ಓಡುತ್ತಿದ್ದ ಚಾಲಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಲ್ಕೊಮೀಟರ್‌ನಲ್ಲಿ ಚಾಲಕ ಸಂದೀಪ್ ಪಾಟೀಲ್ ಮದ್ಯ ಸೇವನೆ ಮಾಡಿರುವುದು ಪತ್ತೆಯಾಗಿದೆ. ಬಳಿಕ ಸಂಚಾರಿ ಪೊಲೀಸರ ಜೊತೆ ಸಂದೀಪ್ ಮಾತಿನ ವಾಗ್ದಾಳಿ ನಡೆಸಿದ್ದಾನೆ. ತದನಂತರ, ಮಡಿವಾಳ ಸಂಚಾರಿ ಪೊಲೀಸರು ಆತನನ್ನು ವಶಕ್ಕೆ ಪಡೆದು ವಾಹನ ಜಪ್ತಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News