ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಓರ್ವ ಸೆರೆ

Update: 2019-05-17 17:51 GMT

ಬಂಟ್ವಾಳ : ಸಾರಡ್ಕದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ  ಕೇರಳದಿಂದ ಬಂದ ತಂಡವೊಂದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಎಣ್ಮಕಜೆ ಗ್ರಾಮದ ಚೌರ್ಕಾಡು ನಿವಾಸಿ ಅಶ್ರಫ್ ಯಾನೆ ಹಸೈನಾರ್ (29) ಬಂಧಿತ ಆರೋಪಿ.

ಕೇರಳದಲ್ಲಿ ಹುಡುಗಿ ಅಪಹರಣವಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿ ಸಾರಡ್ಕ ಚೆಕ್‍ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಕೇರಳ ಕಡೆಯಿಂದ ಬಂದ ತಂಡ ವಾಹನವೊಂದಕ್ಕೆ ತಮ್ಮ ವಾಹನಗಳನ್ನು ಅಡ್ಡಲಾಗಿ ನಿಲ್ಲಿಸಿದ್ದೂ ಅಲ್ಲದೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು ಎನ್ನಲಾಗಿದೆ. ಈತನನ್ನು ಅಡ್ಯನಡ್ಕದಲ್ಲಿ ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News