ಪುಣಚ: ಮನೇಲ ಚರ್ಚ್ ಗೆ ಸೇರಿದ ಗ್ರೋಟ್ಟೊಗೆ ದುಷ್ಕರ್ಮಿಗಳಿಂದ ಹಾನಿ

Update: 2019-05-18 08:48 GMT

ಬಂಟ್ವಾಳ, ಮೇ ೧8: ಮನೇಲ ಕ್ರಿಸ್ತರಾಜ ದೇವಾಲಯಕ್ಕೆ ಸೇರಿದ ಕ್ರೈಸ್ತ ದೇವರ ಮೂರ್ತಿಯ ಗ್ರೋಟ್ಟೊವನ್ನು ದುಷ್ಕರ್ಮಿಗಳು ಹಾನಿಗೊಳಿಸಿದ ಘಟನೆ ವಿಟ್ಲ ಸಮೀಪದ ಪುಣಚ- ತೋರಣಕಟ್ಟೆ ಎಂಬಲ್ಲಿ ಶನಿವಾರ ನಡೆದಿದೆ.

ಇಲ್ಲಿನ ತೋರಣಕಟ್ಟೆ ರಸ್ತೆಯಲ್ಲಿರುವ ಮೂರ್ತಿಗೆ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ. ಇದರಿಂದ ಗ್ರೋಟ್ಟೊವಿನ ಹೊರಗಿನ ಗಾಜು ಪುಡಿಯಾಗಿದೆ.

ಇಂದು ಬೆಳಗ್ಗೆ 10:30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಟ್ಲ ಠಾಣಾಧಿಕಾರಿ ಯಲ್ಲಪ್ಪ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

 ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಚರ್ಚಿನ ಧರ್ಮಗುರು ಪೊಲೀಸರನ್ನು ಆಗ್ರಹಿಸಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News