ಗೋಡ್ಸೆಯನ್ನು ಸಮರ್ಥಿಸಿದ ಬಿಜೆಪಿ ಸಂಸದರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Update: 2019-05-18 10:06 GMT

ಬೆಂಗಳೂರು, ಮೇ 18: ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಸಮರ್ಥಿಸುತ್ತಿರುವ ಬಿಜೆಪಿ ಸಂಸದರಾದ ನಳಿನ್ ಕುಮಾರ್ ಕಟೀಲು, ಅನಂತ ಕುಮಾರ ಹೆಗಡೆ ಹಾಗೂ ಭೋಪಾಲದ ಬಿಜೆಪಿ ಚುನಾವಣಾ ಅಭ್ಯರ್ಥಿ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಕಾಂಗ್ರೆಸ್ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಗರದ ಮೌರ್ಯ ಸರ್ಕಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ರಿಝ್ವನ್ ಅರ್ಷದ್ ಮೊದಲಾದವರು ಮಾತನಾಡಿ ಬಿಜೆಪಿ ನಾಯಕರ ಹೇಳಿಕೆಯನ್ನು ಖಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News