ಠಾಣೆಗೆ ಕಲ್ಲೆಸೆತ ಪ್ರಕರಣ: ಮುಂದುವರೆದ ತನಿಖೆ
Update: 2019-05-18 16:42 GMT
ಕುಂದಾಪುರ, ಮೇ 18: ಅಕ್ರಮ ಮರಳುಗಾರಿಕೆ ಸಂಬಂಧ ಓಮ್ನಿ ಕಾರನ್ನು ವಶಪಡಿಸಿಕೊಂಡಿರುವ ವಿಚಾರದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಕಲ್ಲೆ ಎಸೆದು, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಪ್ರಕರಣದ ತನಿಖೆ ಮುಂದುವರೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಮೂರು ತಂಡಗಳನ್ನು ರಚಿಸಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ಗಳ ಶೋಧ ಕಾರ್ಯ ಮುಂದುವರೆಸಲಾಗಿದೆ. ಇಂದು ಯಾರನ್ನು ಕೂಡ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.