ಅತಿಥಿ ಶಿಕ್ಷಕರು/ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Update: 2019-05-18 17:48 GMT

ಮಂಗಳೂರು, ಮೇ 18: ದ.ಕ. ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಮೆನ್ನಬೆಟ್ಟು ಗ್ರಾಮದ ಕಮ್ಮಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅತಿಥಿ ಶಿಕ್ಷಕರು/ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶಾಲಾ ವಿಭಾಗದಲ್ಲಿ ಗಣಿತ, ವಿಜ್ಞಾನ, ಕನ್ನಡ ಸಹಶಿಕ್ಷಕರ ಹುದ್ದೆಗಳಿಗೆ ಹಾಗೂ ಕಾಲೇಜು ವಿಭಾಗದ ಗಣಿತ, ಭೌತಶಾಸ್ತ್ರ, ಜೀವಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಕ ವಿಜ್ಞಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಾಸಿಕ ಗೌರವಧನದ ಮೇರೆಗೆ ನಿಗದಿತ ವಿದ್ಯಾರ್ಹತೆಯನ್ನು ಹೊಂದಿರುವ ಆಸಕ್ತ ಅಭ್ಯರ್ಥಿಗಳು ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಮೇ 25ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಾಲಾ ಪ್ರಾಂಶುಪಾಲರನ್ನು (9480241974) ಸಂಪರ್ಕಿಸಬೇಕು ಎಂದು ಮೆನ್ನಬೆಟ್ಟು ಕಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News