ಕಳಾರ: ರಸ್ತೆಯಿಂದ ಮನೆಯಂಗಳಕ್ಕೆ ಉರುಳಿದ ಓಮ್ನಿ ಕಾರು

Update: 2019-05-19 07:58 GMT

ಕಡಬ, ಮೇ 19: ಮಾರುತಿ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರದಲ್ಲಿ ಸಂಭವಿಸಿದೆ.

ಕಡಬದ ಬಸ್ ನಿಲ್ದಾಣದ ಬಳಿ ವ್ಯಾಪಾರ ನಡೆಸುತ್ತಿರುವ ಅಬ್ಬಾಸ್ ಎಂಬವರು ತನ್ನ ಮಾರುತಿ ಓಮ್ನಿ ಕಾರಿನಲ್ಲಿ ಉಪ್ಪಿನಂಗಡಿಯಿಂದ ಕಡಬಕ್ಕೆ ತೆರಳುತ್ತಿದ್ದಾಗ ಕಳಾರ ಸಮೀಪ ಬೇರೊಂದು ವಾಹನವು ಇವರ ಓಮ್ನಿಯನ್ನು ಓವರ್ ಟೇಕ್ ಮಾಡಿದೆ. ಈ ಸಂದರ್ಭ ರಸ್ತೆ ಬಿಟ್ಟು ಕೊಡುವ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮನೆಯೊಂದರ ಅಂಗಳಕ್ಕೆ ಉರುಳಿ ಬಿದ್ದಿದೆ.

ಘಟನೆಯಲ್ಲಿ ಓಮ್ನಿ ಚಲಾಯಿಸುತ್ತಿದ್ದ ಅಬ್ಬಾಸ್ ಅಪಾಯದಿಂದ ಪಾರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News