ಜಾತ್ಯತೀತರನ್ನು ಒಗ್ಗೂಡಿಸುವಲ್ಲಿ ದೇವೇಗೌಡರ ಪಾತ್ರವನ್ನು ದೇಶ ಮರೆಯದು: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2019-05-19 14:34 GMT

ಬೆಂಗಳೂರು, ಮೇ 19: ‘ಕೋಮುವಾದಿ ಶಕ್ತಿಗಳ ವಿರುದ್ಧ ಜಾತ್ಯತೀತರನ್ನು ಒಗ್ಗೂಡಿಸುವಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಪಾತ್ರವನ್ನು ದೇಶ ಎಂದೂ ಮರೆಯದು’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ದೇವೇಗೌಡರ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.

ರಾಜ್ಯ ಹಾಗೂ ರಾಷ್ಟ್ರ ರಾಜಕಾರಣಕ್ಕೆ ದೇವೇಗೌಡ ಅವರ ಕೊಡುಗೆ ಮಹತ್ವದ್ದು. ದೇವೇಗೌಡರ ನಡೆ ನನಗೆ ಸದಾ ಮಾರ್ಗದರ್ಶಿ. ಅವರ ಸಾಮಾಜಿಕ ಕಳಕಳಿ ನನಗೆ ಇಂದಿಗೂ ಆದರ್ಶ. ಅವರ ಹುಟ್ಟುಹಬ್ಬದ ದಿನದಂದು ಅವರ ಕೊಡುಗೆಯನ್ನು ಸ್ಮರಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.

‘ಇಂದು ನಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಜನ್ಮದಿನದ ಸಂದರ್ಭದಲ್ಲಿ ಶುಭ ಕೋರಿದ ಎಲ್ಲರಿಗೂ ಧನ್ಯವಾದಗಳು. ಇಂದು ಕುಟುಂಬದ ಸದಸ್ಯರೆಲ್ಲರೂ ಜೊತೆಯಾಗಿ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಅವರ ಆಯುರಾರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದೆವು. ಅವರ ಅನುಭವ, ಮಾರ್ಗದರ್ಶನ ಪಕ್ಷಕ್ಕೆ ಹಾಗೂ ನಾಡಿಗೆ ಹೀಗೆ ಲಭ್ಯವಾಗಲಿ’ ಎಂದು ಮತ್ತೊಂದು ಟ್ವಿಟ್‌ನಲ್ಲಿ ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News