ಎಚ್.ವಿಶ್ವನಾಥ್ ಹೇಳಿಕೆಗಳಿಂದ ಗೊಂದಲ ಸೃಷ್ಟಿ: ಕಂದಾಯ ಸಚಿವ ಆರ್.ವಿ.ದೇಶಪಾಂಡೆ

Update: 2019-05-19 14:56 GMT

ವಿಜಯಪುರ, ಮೇ 19: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ತಮ್ಮ ಹೇಳಿಕೆಗಳ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ. ಸರಕಾರ ನಡೆಸಲು ಮನಸ್ಸಿಲ್ಲದಿದ್ದರೆ ಅವರ ನಿರ್ಧಾರವನ್ನು ಸ್ಪಷ್ಟವಾಗಿ ತಿಳಿಸಲಿ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ರವಿವಾರ ಜಿಲ್ಲೆಯಲ್ಲಿನ ಬರ ವೀಕ್ಷಣೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಆದರೆ, ವಿಶ್ವನಾಥ್ ನೀಡುತ್ತಿರುವ ಹೇಳಿಕೆಗಳಿಂದ ಗೊಂದಲ ಸೃಷ್ಟಿಯಾಗುತ್ತಿದೆ ಎಂದರು.

ರಾಜ್ಯ ಸರಕಾರದ ಸಮನ್ವಯ ಸಮಿತಿ ರಚನೆ ಮಾಡಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿ ಸಮನ್ವಯ ಸಮಿತಿ ರಚಿಸಿದ್ದಾರೆ ಎಂದು ಅವರು ಹೇಳಿದರು.

ಉಭಯ ಪಕ್ಷಗಳ ಮುಖಂಡರು ಸಮನ್ವಯ ಸಮಿತಿಯ ಸದಸ್ಯರಾಗಿದ್ದಾರೆ. ಆದರೆ, ಅದನ್ನು ಸಿದ್ದರಾಮಯ್ಯ ಸಮಿತಿ ಎಂದು ಕರೆದಿರುವ ವಿಶ್ವನಾಥ್ ನೀಡುವ ಹೇಳಿಕೆಗಳಿಗೆಲ್ಲ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ದೇಶಪಾಂಡೆ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News