ಬೈಕ್ ಸ್ಕಿಡ್: ಸಹಸವಾರ ಮೃತ್ಯು

Update: 2019-05-19 16:12 GMT

ಉಡುಪಿ, ಮೇ 19: ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಹಿಂಬದಿ ಸವಾರ ಮೃತಪಟ್ಟ ಘಟನೆ ಮೇ 19ರಂದು ನಸುಕಿನ ವೇಳೆ ಸಂತೆಕಟ್ಟೆ ಜಂಕ್ಷನ್ ಬಳಿ ನಡೆದಿದೆ.

ಮೃತರನ್ನು ಕೆ.ಜಿ.ರೋಡ್ ನಿವಾಸಿ ಸುಬ್ರಹ್ಮಣ್ಯ(23) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಹಿತೇಶ್ ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರಿಬ್ಬರು ಹಳೆಯಂಗಡಿಯಲ್ಲಿರುವ ಗೆಳೆಯನ ಮೆಹಂದಿ ಕಾರ್ಯಕ್ರಮ ಮುಗಿಸಿ ಬೈಕಿನಲ್ಲಿ ವಾಪಾಸು ಬರುತ್ತಿದ್ದಾಗ ನಿಯಂತ್ರಣ ತಪ್ಪಿದ ರಸ್ತೆಯಲ್ಲಿ ಸ್ಕಿಡ್ ಆಗಿ ಬಿತ್ತೆನ್ನಲಾಗಿದೆ. ಇದರಿಂದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಇವರಲ್ಲಿ ಸುಬ್ರಹ್ಮಣ್ಯ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News