ಆಯತಪ್ಪಿ ಕೆಳಗೆ ಬಿದ್ದು ಬೈಕ್ ಸವಾರ ಸಾವು

Update: 2019-05-19 17:14 GMT

ಮಳವಳ್ಳಿ, ಮೇ 19: ಪಟ್ಟಣದ ಹೊರವಲಯದ ಬುಗತಗಹಳ್ಳಿ ಬಳಿ ಮದ್ದೂರು-ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಬೈಕ್ ಸವಾರನೊಬ್ಬ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ತಾಲೂಕಿನ ಕಿರುಗಾವಲು ಸಮೀಪದ ಪುಟ್ಟೇಗೌಡನ ಕೊಪ್ಪಲು ಗ್ರಾಮದ ನಾಗರಾಜು(55) ಮೃತರು. ಶುಕ್ರವಾರ ಮಧ್ಯಾಹ್ನ ಮದ್ದೂರು ಕಡೆಗೆ ತಮ್ಮ ಬೈಕ್‍ನಲ್ಲಿ ತೆರಳುತ್ತಿದ್ದಾಗ ಬುಗತಗಹಳ್ಳಿ ಬಳಿ ಇರುವ ರೇಷ್ಮೆ ಮಾರುಕಟ್ಟೆ ಮುಂಭಾಗ ಮೇಕೆಯೊಂದು ಬೈಕ್ ಅಡ್ಡ ಬಂದ ಪರಿಣಾಮ ಪುಟ್ಟೇಗೌಡ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆ ಮಧ್ಯಭಾಗದಲ್ಲೇ ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ತಲೆಯ ಬಾಗಕ್ಕೆ ತೀವ್ರವಾಗಿ ಪೆಟ್ಟುಬಿದ್ದು ನರಳಾಡುತ್ತಿದ್ದವರನ್ನು ಸ್ಥಳೀಯರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.

ನಂತರ ವಾರಸುದಾರರು ವೈದ್ಯರ ಸಲಹೆಯಂತೆ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆ ಕರೆದೊಯ್ದು ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಪುಟ್ಟೇಗೌಡ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.                                                                                                  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News