ಮಂಗಳೂರಿನಲ್ಲಿ ಬಿರುಸಿನ ಮಳೆ

Update: 2019-05-19 18:15 GMT

ಮಂಗಳೂರು, ಮೇ 19: ನಗರದಲ್ಲಿ ನೀರಿಗಾಗಿ ಪರಿತಪಿಸುತ್ತಿದ್ದ ಸಮಯದಲ್ಲೇ ರವಿವಾರ ರಾತ್ರಿ ಬಿರುಸಿನ ಮಳೆ ಸುರಿದಿದೆ.

ರಾತ್ರಿ 10:30ಕ್ಕೆ ಆರಂಭವಾದ ತುಂತುರು ಮಳೆ ಕ್ರಮೇಣ ಬಿರುಸು ಪಡೆಯಿತು. ನಗರದಾದ್ಯಂತ ಗುಡುಗು, ಮಿಂಚು ಸಹಿತ ಉತ್ತಮ‌ ಮಳೆಯಾಗಿದೆ.

ಮುಂಜಾಗ್ರತಾ ಕ್ರಮವಾಗಿ ಮೆಸ್ಕಾಂನಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಮಳೆಗಾಗಿ ಕಳೆದ ಕೆಲ ದಿನಗಳಿಂದ ಮಸೀದಿ, ಮಂದಿರ, ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News