ಧರ್ಮಸ್ಥಳದಲ್ಲಿ ನೀರಿನ ಅಭಾವ: ಹೆಗ್ಗಡೆ ಜೊತೆ ಮುಖ್ಯ ಕಾರ್ಯದರ್ಶಿ ಚರ್ಚೆ

Update: 2019-05-20 11:17 GMT

ಬೆಂಗಳೂರು, ಮೇ 20: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ತೀವ್ರ ಅಭಾವ ತಲೆದೋರಿರುವ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರವಾಗಿ  ಪರಿಗಣಿಸಿದ್ದು, ಅವರ ಸಲಹೆಯಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಚರ್ಚಿಸಿದರು.

ಈ ಸಂದರ್ಭ ಸರ್ಕಾರದ ಕಳಕಳಿಗೆ ಕೃತಜ್ಞತೆ ವ್ಯಕ್ತಪಡಿಸಿದ ಶ್ರೀ ಹೆಗ್ಗಡೆಯವರು ಇನ್ನೊಂದು ಚೆಕ್‍ಡ್ಯಾಂ ನಿರ್ಮಾಣದ ಅಗತ್ಯವಿದೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಇಂದು ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News