ಮಹಿಳೆಯರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

Update: 2019-05-20 15:15 GMT

ಬೈಂದೂರು, ಮೇ 20: ಕಿರಿಮಂಜೇಶ್ವರದ ಜಾತ್ರೆಯಿಂದ ನಿನ್ನೆ ರಾತ್ರಿ ಮನೆಗೆ ಮರಳುತಿದ್ದ ಶಾರದಾ ದೇವಾಡಿಗ ಮತ್ತು ಅವರ ಕುಟುಂಬದ ಇತರ ಮಹಿಳಾ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕುಂದಾಪುರ ತಾಲೂಕು ಸಮಿತಿ ಒತ್ತಾಯಿಸಿದೆ.

ಶಾರದಾ ದೇವಾಡಿಗರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆ ಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನುಳಿದ ಮಹಿಳೆಯರು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಪೊಲೀಸರು ತಕ್ಷಣವೇ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಈ ಗಲಭೆಯನ್ನು ಜಾತಿಗಳ ನಡುವಿನ ಗಲಭೆ ಎಂಬಂತೆ ಕೆಲವು ಶಕ್ತಿಗಳು ಬಿಂಬಿಸುತ್ತಿರುವುದು ಸರಿಯಲ್ಲ. ಎಲ್ಲಾ ಜಾತಿ, ಎಲ್ಲಾ ಧರ್ಮಗಳಲ್ಲಿಯೂ ಕಿಡಿಗೇಡಿಗಳು ಇದ್ದು ಅವರನ್ನು ಪೊಲೀಸರು ನಿಯಂತ್ರಿಸಬೇಕೆಂದು ಸಮಿತಿಯ ಅಧ್ಯಕ್ಷೆ ಆರತಿ, ಕಾರ್ಯದರ್ಶಿ ಶೀಲಾವತಿ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News