ಉಡುಪಿ ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಮೇ 23ರಂದು ಉಚಿತ ಮೂಳೆ ಖನಿಜಾಂಶ ಸಾಂದ್ರತೆ ಶಿಬಿರ

Update: 2019-05-20 16:47 GMT

ಉಡುಪಿ, ಮೇ 20: ಇಲ್ಲಿನ ಡಾ.ಟಿ.ಎಂ.ಎ.ಪೈ ಆಸ್ಪತ್ರೆಯಲ್ಲಿ ಮೇ 23ರಂದು ಉಚಿತ ಮೂಳೆಯ ಖನಿಜಾಂಶಗಳ ಸಾಂದ್ರತೆ ಶಿಬಿರ ನಡೆಯಲಿದೆ ಎಂದು ಡಾ. ಟಿ.ಎಂ.ಎ. ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಪಾರ್ವತಿ ವಿ ಭಟ್ ತಿಳಿಸಿದ್ದಾರೆ.

ಆಸ್ಟಿಯೊಪೊರೋಸಿಸ್ ಮೂಳೆ ತೆಳುವಾಗಿ ಮತ್ತು ದುರ್ಬಲವಾಗಿ ಮೂಳೆ ಮುರಿತಕ್ಕೆ ಕಾರಣವಾಗುವ ಒಂದು ಸದ್ದಿಲ್ಲದ ಸ್ಥಿತಿ. ದೇಹವು ಹೊಸ ಮೂಳೆಗಳ ರಚನೆ ರೂಪಿಸಲು ವಿಫಲವಾದರೆ ಅಥವಾ ಹಳೆಯ ಮೂಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ನಾಶವಾದರೆ ಈ ರೋಗ ಸಂಭವಿಸುತ್ತದೆ. ಭಾರತದಲ್ಲಿ ಸುಮಾರು 25 ಮಿಲಿಯನ್ ಜನರು ಆಸ್ಟಿಯೊಪೊರೋಸಿಸ್ ರೋಗದಿಂದ ಬಳಲುತ್ತಿದ್ದಾರೆ. ಈ ರೋಗ ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ ಹೆಚ್ಚು ಸಾಮಾನ್ಯವಾಗಿದೆ. ಆದರೆ ಮಾಹಿತಿ ಕೊರತೆಯ ಕಾರಣದಿಂದಾಗಿ ಚಿಕಿತ್ಸೆ ತೆಗೆದುಕೊಳ್ಳುವುದಿಲ್ಲ ಎಂದು ಡಾ.ಟಿ.ಎಂ.ಎ.ಪೈ ಆಸ್ಪತ್ರೆಯ ಮೂಳೆ ವಿಭಾಗದ ಮುಖ್ಯಸ್ಥ ಡಾ. ರಾಜಾರಾಮ್ ಪೈ ಹೇಳುತ್ತಾರೆ.

ಆಸ್ಟಿಯೊಪೊರೋಸಿಸ್ ಮೂಳೆ ತೆಳುವಾಗಿ ಮತ್ತು ದುರ್ಬಲವಾಗಿ ಮೂಳೆ ಮುರಿತಕ್ಕೆ ಕಾರಣವಾಗುವ ಒಂದು ಸದ್ದಿಲ್ಲದ ಸ್ಥಿತಿ. ದೇಹವು ಹೊಸ ಮೂಳೆಗಳ ರಚನೆ ರೂಪಿಸಲು ವಿಫಲವಾದರೆ ಅಥವಾ ಹಳೆಯ ಮೂಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ನಾಶವಾದರೆ ಈ ರೋಗ ಸಂವಿಸುತ್ತದೆ. ಭಾರತದಲ್ಲಿ ಸುಮಾರು 25 ಮಿಲಿಯನ್ ಜನರು ಆಸ್ಟಿಯೊಪೊರೋಸಿಸ್ ರೋಗದಿಂದ ಬಳಲುತ್ತಿದ್ದಾರೆ.

ಆಸ್ಟಿಯೊಪೊರೋಸಿಸ್ ಕಾಯಿಲೆಯನ್ನು ದೇಹದ ಮೇಲೆ ಯಾವುದೇ ಗಾಯವಿಲ್ಲದೇ ಅತ್ಯಂತ ಸುಲಭದಲ್ಲಿ ಕಂಡು ಹಿಡಿಯುವ ವಿಧಾನವೇ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷೆ. ಪರೀಕ್ಷೆಯ ನಂತರ ತಜ್ಞರು ರೋಗ ನಿರ್ಣಯ ಮಾಡಿ, ಸಲಹೆಗಳನ್ನು ನೀಡುತ್ತಾರೆ. ಮಹಿಳೆಯರು ಅದರಲ್ಲೂ 50 ವರ್ಷ ದಾಟಿದವರು ಅವರ ಮೂಳೆಯ ಸಾಂದ್ರತೆಯನ್ನು ಪರೀಕ್ಷಿಸಿಕೊಳ್ಳಲು ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು ಎಂಬುದು ತಜ್ಞರ ಅಭಿಪ್ರಾಯವಾಗಿದೆ.

ಡಾ.ಟಿ.ಎಂ.ಎ.ಪೈ ಆಸ್ಪತ್ರೆಯ ಮೂಳೆ ವಿಭಾಗದಲ್ಲಿ ಮೇ 23ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಉಚಿತ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರವನ್ನು ಏರ್ಪಡಿಸಲಾಗಿದೆ. 40 ವರ್ಷ ದಾಟಿದವರು ಶಿಬಿರಕ್ಕೆ ಹೆಸರನ್ನು ನೋಂದಾಯಿಸಬಹುದು. ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ 0820-2526501 ಮತ್ತು ದೂರವಾಣಿ ವಿಸ್ತರಣೆ ಸಂಖ್ಯೆ 2164ಗೆ ಸಂಪರ್ಕಿ ಸಬಹುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News