ಅಧಿಕಾರಿಗೆ ಶಾಸಕ ನಾರಾಯಣಗೌಡ ಬೆದರಿಕೆ ?: ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್

Update: 2019-05-20 17:21 GMT

ಮಂಡ್ಯ, ಮೇ 20: ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡ ಮತ್ತೆ ಮತ್ತೆ ವಿವಾದ ಮೈಮೇಲೆ ಎಳೆದುಕೊಳ್ಳುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರ ವಿರುದ್ಧ ನಾಲಗೆ ಹರಿಬಿಟ್ಟಿದ್ದಾರೆ ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರ ಪ್ರಚಾರಕ್ಕೆ ಇಳಿದಿದ್ದ ಚಿತ್ರನಟರಾದ ದರ್ಶನ್ ಹಾಗೂ ಯಶ್ ಗೆ ಬೆದರಿಕೆ ಹಾಕಿ ವಿವಾದ ಸೃಷ್ಟಿಸಿದ್ದ ಶಾಸಕ ಈಗ ಅಧಿಕಾರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಸರಕಾರಿ ಅಧಿಕಾರಿಯೋರ್ವರಿಗೆ ಬೆದರಿಕೆ ಹಾಕಿದ್ದಲ್ಲದೆ, ನಾವು ಮಂಡ್ಯದವರು ನೀನು ಎಲ್ಲೇ ಹೋದರೂ ಉಳಿದುಕೊಳ್ಳಲು ಆಗುವುದಿಲ್ಲ ಎಂದು ಏಕವಚನದಲ್ಲಿಯೇ ನಿಂದಿಸಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ.

ಮದ್ದೂರು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಮುರಳಿಕೃಷ್ಣ ಅವರಿಗೆ ಶಾಸಕ ನಾರಾಯಣಗೌಡ ದೂರವಾಣಿಯಲ್ಲಿ ಬೆದರಿಕೆ ಹಾಕಿದ್ದಾರೆ. ಶಾಸಕರು ಅಧಿಕಾರಿಗೆ ಹೀಗೆ ಬೈದಿರುವುದು ಕಚೇರಿಯಲ್ಲಿ ಕೆಲಸ ಮಾಡುವ ಓರ್ವ ಮಹಿಳೆಯ ವಿಚಾರಕ್ಕೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News