ಪ್ರಧಾನಿ ಮೋದಿ ನನ್ನನ್ನು ಕೊಲ್ಲಲು ಬಯಸಿದ್ದಾರೆ: ಕೇಜ್ರಿವಾಲ್

Update: 2019-05-21 06:39 GMT

ಹೊಸದಿಲ್ಲಿ, ಮೇ 21: ಪ್ರಧಾನ ಮಂತ್ರಿ ನರೇಂದ್ರ ಮೋದಿ ನನ್ನನ್ನು ಕೊಲ್ಲಲು ಬಯಸಿದ್ದಾರೆ ಎಂದು ದಿಲ್ಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಬಿಜೆಪಿ ನಾಯಕ ವಿಜಯ್ ಗೋಯಲ್ ಮಾಡಿರುವ ಟ್ವೀಟ್ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು ಭದ್ರತಾ ಸಿಬ್ಬಂದಿ ನನ್ನ ಕೊಲ್ಲಲು ಬಯಸಿಲ್ಲ. ಆದರೆ ಪ್ರಧಾನಿ ಮೋದಿ ಕೊಲ್ಲಲು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ತನ್ನ ಭದ್ರತಾ ಸಿಬ್ಬಂದಿಗಳಿಂದ ಕೊಲೆಯಾದಂತೆ ನನ್ನದೇ ಖಾಸಗಿ ಭದ್ರತಾ ಸಿಬ್ಬಂದಿಗಳು ಬಿಜೆಪಿಯ ಕುಮ್ಮಕ್ಕಿನಿಂದ ಕೊಲೆ ಮಾಡಬಹುದು ಎಂದು ಆರೋಪಿಸಿದ್ದರು.

ಇದಕ್ಕೆ ಕೇಜ್ರಿವಾಲ್ ಗೆ ಅನುಮಾನವಿದ್ದರೆ ರಕ್ಷಣೆಗೆ ಆತ್ಮೀಯ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಿ ಎಂದು ಬಿಜೆಪಿ ನಾಯಕ ವಿಜಯ್ ಗೋಯಲ್ ಟ್ವೀಟ್ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News