ದೆಹಲಿಯಲ್ಲಿ ರಾಜೀವ್ ಶುಕ್ಲಾರನ್ನು ಭೇಟಿಯಾದ ಸಚಿವ ಯು.ಟಿ.ಖಾದರ್

Update: 2019-05-22 07:42 GMT

ಮಂಗಳೂರು: ರಾಜ್ಯ ನಗರಾಭಿವೃದ್ಧಿ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ಮಂಗಳವಾರ ನವದೆಹಲಿಯಲ್ಲಿ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ರಾಜೀವ್ ಶುಕ್ಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಸಚಿವ ಯು.ಟಿ.ಖಾದರ್ ಮಂಗಳೂರಿನಲ್ಲಿ ಪ್ರತಿವರ್ಷ ನಡೆಯುವ ಎಂಪಿಎಲ್ (ಮಂಗಳೂರು ಪ್ರೀಮಿಯರ್ ಲೀಗ್) ನಲ್ಲಿ ಉಳ್ಳಾಲ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಸಚಿವ ಯು.ಟಿ.ಖಾದರ್ ಜೊತೆ ರಾಜಸ್ಥಾನದ ಯುವ ಕಾಂಗ್ರೆಸ್ ಮುಖಂಡ ದೌಲತ್ ಸಿಂಗ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News